ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧೆ? ಸಚಿವ ಶ್ರೀರಾಮುಲು ಹೇಳಿದ್ದೇನು?

ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧೆ? ಸಚಿವ ಶ್ರೀರಾಮುಲು ಹೇಳಿದ್ದೇನು?

ಳ್ಳಾರಿ : ರಾಜಕೀಯ ಮತ್ತು ಸ್ನೇಹವನ್ನು ಒಂದೇ ತಕ್ಕಡಿಯಲ್ಲಿ ಇಟ್ಟುಕೊಳ್ಳಲ್ಲ. ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುತ್ತೇವೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುತ್ತೇವೆ.

ರಾಜಕೀಯ ಮತ್ತು ಸ್ನೇಹವನ್ನು ಒಂದೇ ತಕ್ಕಡಿಯಲ್ಲಿ ಇಟ್ಟುಕೊಳ್ಳಲ್ಲ. ರಾಜಕೀಯದಲ್ಲಿ ನನ್ನದೇ ಹೋರಾಟ ಇರುತ್ತೇ. ಸ್ನೇಹ ಪರಿಗಣಿಸಲ್ಲ. ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುಸುವುದು ನನ್ನ ಉದ್ದೇಶ ಎಂದರು.

ಚುನಾವಣಾ ವಿಷಯದಲ್ಲಿ ರಾಜಕೀಯವೇ ಮುಖ್ಯ, ಸ್ನೇಹವಲ್ಲ. ಯಾವುದೇ ಪಕ್ಷದಿಂದ ಸ್ನೇಹವನ್ನು ರಾಜಕೀಯದಿಂದ ದೂರವಿಡುವೆ.ಸೋಮಶೇಖರ್ ರೆಡ್ಡಿ ಸ್ಪರ್ಧೆ ಬಗ್ಗೆ ಅನುಮಾನ ಬೇಡ. ಬಳ್ಳಾರಿ ನಗರದಿಂದ ಸೋಮಶೇಖರ್ ರೆಡ್ಡಿ ಸ್ಪರ್ಧೆ ಮಾಡ್ತಾರೆ.ಬಳ್ಳಾರಿ ಗ್ರಾಮೀಣ ಅಥವಾ ಸಂಡೂರಿನಿಂದ ಸ್ಪರ್ಧಿಸಲು ಚಿಂತನೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.