ಫೆ. 23ಕ್ಕೆ ಸಂಡೂರಿಗೆ ಅಮಿತ್ ಶಾ ಭೇಟಿ; ನಾಲ್ಕು ಜಿಲ್ಲೆ ಬಿಜೆಪಿ ಮುಖಂಡರ ಸಭೆ

ಫೆ. 23ಕ್ಕೆ ಸಂಡೂರಿಗೆ ಅಮಿತ್ ಶಾ ಭೇಟಿ; ನಾಲ್ಕು ಜಿಲ್ಲೆ ಬಿಜೆಪಿ ಮುಖಂಡರ ಸಭೆ

ಳ್ಳಾರಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಇದೀಗ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ನಾಯಕರ ಪ್ರಚಾರ ಭರಾಟೆ ಜೋರಾಗಿ ನಡೆಯುತ್ತಿದೆ.

ಈ ನಡುವೆಯೇ ರಾಜಕೀಯ ನಾಯಕರ ಆರೋಪ- ಪ್ರತ್ಯಾರೋಪ ಶುರುವಾಗಿದೆ.

ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ನಾನಾ ಕಸರತ್ತು ನಡೆಸಿದ್ದಾರೆ. ಹೀಗಾಗಿ ಕೇಂದ್ರ ನಾಯಕರು ಆಗಾಗ ಕರ್ನಾಟಕ್ಕೆ ಬರುತ್ತಿದ್ದಾರೆ. ಇತ್ತೀಚೆಗೆ ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದರು. ಬೃಹತ್‌ ಸಮಾವೇಶ ನಡೆಸಿ, ಚುನಾವಣೆಗೆ ರಣತಂತ್ರ ರೂಪಿಸಿದ್ದಾರೆ.

ಇದೀಗ ಫೆ. 23ಕ್ಕೆ ಸಂಡೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ.ಸಂಡೂರಿನಲ್ಲಿ ಸಾರ್ವಜನಿಕ ಸಮಾವೇಶ ಹಾಗೂ ತೋರಣಗಲ್​ನಲ್ಲಿ ನಾಲ್ಕು ಜಿಲ್ಲೆ ಬಿಜೆಪಿ ಮುಖಂಡರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.ಇದೀಗ ಸಂಡೂರಿನಲ್ಲಿ ಅಮಿತ್‌ ಷಾ ರಣಕಳಹೆ ಊದಲಿದ್ದಾರೆ.