ಭಾರತದಲ್ಲಿ ಹಲವು ಖಲಿಸ್ತಾನಿ ಪರ ನಾಯಕರ ಟ್ವಿಟರ್ ಖಾತೆಗಳು ನಿರ್ಬಂಧ

ಭಾರತದಲ್ಲಿ ಹಲವು ಖಲಿಸ್ತಾನಿ ಪರ ನಾಯಕರ ಟ್ವಿಟರ್ ಖಾತೆಗಳು ನಿರ್ಬಂಧ

ವದೆಹಲಿ : ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ವಿರುದ್ಧದ ಪೊಲೀಸ್ ಕ್ರಮ ಕೈಗೊಂಡಿದ್ದಾರೆ. ಇದರ ನಡುವೆ ಭಾರದಲ್ಲಿ ಕೆನಡಾದ ನ್ಯೂ ಡೆಮಾಕ್ರಟಿಕ್ ಪಕ್ಷದ ನಾಯಕ ಜಗ್ಮೀತ್ ಸಿಂಗ್ ಸೇರಿದಂತೆ ಖಲಿಸ್ತಾನ್ ಪರ ಟ್ವಿಟರ್ ಖಾತೆಗಳನ್ನು ತಡೆಹಿಡಿಯಲಾಗಿದೆ.

ಖಲಿಸ್ತಾನಿ ಘಟಕಗಳು ವಿದೇಶಿ ರಾಷ್ಟ್ಳಲ್ಲಿನ ಭಾರತೀಯ ಕಾನ್ಸುಲೇಟ್‌ಗಳು ಮತ್ತು ಹೈಕಮಿಷನ್‌ಗಳ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಕೆನಡಾದ ಕವಯಿತ್ರಿ ರೂಪಿ ಕೌರ್, ಯುನೈಟೆಡ್ ಸಿಖ್ಸ್ ಎಂಬ ಸ್ವಯಂಸೇವಾ ಸಂಸ್ಥೆ ಮತ್ತು ಕೆನಡಾ ಮೂಲದ ಕಾರ್ಯಕರ್ತ ಗುರುದೀಪ್ ಸಿಂಗ್ ಸಹೋಟಾ ಅವರ ಟ್ವಿಟರ್ ಖಾತೆಗಳನ್ನೂ ನಿರ್ಬಂಧಿಸಲಾಗಿದೆ. ಭಾರತ ವಿರೋಧಿ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ಜಗ್ಮೀತ್ ಸಿಂಗ್ ಅವರ ಖಾತೆಯನ್ನು ನಿರ್ಬಂಧಿಸಿರುವುದು ಗಮನಾರ್ಹವಾಗಿದೆ.

ಭಾನುವಾರ ಖಲಿಸ್ತಾನಿ ಬೆಂಬಲಿಗರು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಅನ್ನು ಧ್ವಂಸಗೊಳಿಸಿ ತ್ರಿವರ್ಣ ಧ್ವಜವನ್ನು ಕೆಳಗೆ ಇಳಿಸಿದ್ದರು. ಇದಾದ ಬಳಿಕ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್‌ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದೆ. ಈ ದಾಳಿಯು ಭಾರತೀಯ-ಅಮೆರಿಕನ್ನರಿಂದ ತೀವ್ರ ವಿರೋಧವನ್ನ ಹುಟ್ಟುಹಾಕಿತು, ಅವ್ರು ಇದಕ್ಕೆ ಕಾರಣರಾದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇನ್ನು ಖಲಿಸ್ತಾನಿ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಲಂಡನ್‌ನ ಹೈಕಮಿಷನ್‌ನಲ್ಲಿ ನಡೆದ ಘಟನೆಯ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿದೆ. ಖಲಿಸ್ತಾನಿ ಬೆಂಬಲಿಗರು ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ಕಾನ್ಸುಲೇಟ್ ಜನರಲ್ ಅನ್ನು ಧ್ವಂಸಗೊಳಿಸಿದ ನಂತರ ದೆಹಲಿಯಲ್ಲಿ ಯುಎಸ್ ಚಾರ್ಜ್ ಡಿ'ಅಫೇರ್ಸ್ ಜೊತೆಗಿನ ಸಭೆಯಲ್ಲಿ ಭಾರತವು ತನ್ನ ಬಲವಾದ ಪ್ರತಿಭಟನೆಯನ್ನು ತಿಳಿಸಿತ್ತು.