ಶಾಲಾ ಮಕ್ಕಳಿಗೆ `ನೈತಿಕ ಶಿಕ್ಷಣ' : ಜ.9 ಕ್ಕೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸಭೆ

ಶಾಲಾ ಮಕ್ಕಳಿಗೆ `ನೈತಿಕ ಶಿಕ್ಷಣ' : ಜ.9 ಕ್ಕೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸಭೆ

ಬೆಂಗಳೂರು : ಶಾಲಾ ಮಕ್ಕಳಿಗೆ ನೈತಿಕ ಶಿಕ್ಷಣ ಸಂಬಂಧ ಚರ್ಚೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜನವರಿ 9 ರಂದು ಸಮಾಜದ ಎಲ್ಲ ಧರ್ಮಗಲು, ಮಠಾಧೀಶರು, ಮುಖಂಡರ ಸಭೆ ಕರೆಯಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಗೆ ಆದಿಚುಂಚನಗಿರಿ ಸ್ವಾಮೀಜಿ, ಸಿದ್ದಗಂಗಾ ಸ್ವಾಮೀಜಿ ಸೇರಿ ಎಲ್ಲ ಧರ್ಮಗಳ ಪ್ರಮುಖ ಧರ್ಮ ಗುರುಗಳು, ಮುಖಂಡರಿಗೆ ಆಹ್ವಾನ ಕಳಿಸಲಾಗಿದೆ.

ಶಾಲಾ ಮಕ್ಕಳಿಗೆ ನೈತಿಕ ಶಿಕ್ಷಣ ಆರಂಭಿಸುವುದಾಗಿ ಶಿಕ್ಷಣ ಇಲಾಖೆ ಕೆಲ ತಿಂಗಳ ಹಿಂದೆಯೇ ಘೋಷಣೆ ಮಾಡಿತ್ತು. ಹೀಗಾಗಿ ಈ ಸಂಬಂಧ ಸಮಾಜದ ಧರ್ಮಗುರುಗಳು, ಮಠಾಧೀಶರೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸಭೆ ಆಯೋಜಿಸಲಾಗಿದೆ.