ಕೊಡಗಿನಲ್ಲಿ 'ಕಾಳು ಮೆಣಸು' ಕೊಯ್ಯುವಾಗ ಘೋರ ದುರಂತ : ಏಣಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರ ದುರ್ಮರಣ

ಮಡಿಕೇರಿ : ತೋಟದಲ್ಲಿ ಕಾಳು ಮೆಣಸು ಕೊಯ್ಯುವಾಗ ಅಲ್ಯುಮಿನಿಯಂ ಏಣಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಜಿಲ್ಲೆಯ ಬೇರೆ ಬೇರೆ ತೋಟದಲ್ಲಿ ಒಂದೇ ದಿನ ಈ ಘಟನೆ ನಡೆದಿದೆ.
ಕಾರ್ಮಿಕ ಹುಸೇನ್ ಹೈಸೊಡ್ಲೂರು ಗ್ರಾಮದಲ್ಲಿ ಕಾಳು ಮೆಣಸು ಕೊಯ್ಯುವಾಗ ವಿದ್ಯುತ್ ತಂತಿ ತಗುಲಿ ಮೃತಪಟ್ಟರೆ, ಅಬ್ರುದ್ದೀನ್ ನಾಲ್ಕೇರಿ ಗ್ರಾಮದ ತೋಟವೊಂದರಲ್ಲಿ ಕಾಳು ಮೆಣಸು ಕೊಯ್ಯುವಾಗ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.