ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ತಾಪಮಾನ ಹೆಚ್ಚಳ : ರಣ ಬಿಸಿಲಿಗೆ ಜನರು ತತ್ತರ!

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಶಿವರಾತ್ರಿಗೆ ಬಿಸಿಲು ಹೆಚ್ಚಳವಾಗಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ಇದ್ದು, ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು ಆದರೆ, ಫೆಬ್ರವರಿ ಮಧ್ಯಭಾಗದಲ್ಲೇ ತಾಪಮಾನ ಹೆಚ್ಚಾಗುತ್ತಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೆಳಗಾವಿಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಟ 18 ಡಿಗ್ರಿ ಸೆಲ್ಸಿಯಸ್ ಇದೆ. ಗದಗ ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಟ 17 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಮಡಿಕೇರಿಯಲ್ಲಿ ಗರಿಷ್ಠ 30 ಡಿಗ್ರಿ ಹಾಗೂ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.