ವಂದೇ ಭಾರತ್ ಎಕ್ಸ್‌ಪ್ರೆಸ್‌ʼಗೆ ಮತ್ತೆ ಬಿತ್ತು ಕಲ್ಲೇಟು. 2 ದಿನಗಳಲ್ಲಿ ಎರಡನೇ ಘಟನೆ

ವಂದೇ ಭಾರತ್ ಎಕ್ಸ್‌ಪ್ರೆಸ್‌ʼಗೆ ಮತ್ತೆ ಬಿತ್ತು ಕಲ್ಲೇಟು. 2 ದಿನಗಳಲ್ಲಿ ಎರಡನೇ ಘಟನೆ

ಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಚಾಲನೆ ನೀಡಲಾದ ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express) ಮೇಲೆ ಮತ್ತೆ ಕಲ್ಲು ತೂರಲಾಗಿದ್ದು, ಕಿಟಕಿಗಳ ಗಾಜು ಹೊಡೆದಿದೆ. ಇದು 2 ದಿನಗಳಲ್ಲಿ ಎರಡನೇ ಘಟನೆಯಾಗಿದೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಮಂಗಳವಾರ ಮಧ್ಯಾಹ್ನ ಮತ್ತೆ ಕಲ್ಲು ತೂರಿದ ಘಟನೆ ನಡೆದಿದ್ದು, ಕಿಟಕಿಗಳ ಗಾಜು ಹೊಡೆದಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೋಮವಾರ ಕೂಡ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಅಪರಿಚಿತರು ಕಲ್ಲು ತೂರಿದ್ದರು. ಇದರಿಂದ ಬಾಗಿಲಿ ಗಾಜಿನ ಫಲಕವು ಬಿರುಕು ಬಿಟ್ಟಿತ್ತು.

ಘಟನೆಗಳ ಬಗ್ಗೆ ಎಫ್‌ಐಆರ್ ದಾಖಲಿಸಲಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಜಾಗೃತಿ ಅಭಿಯಾನವನ್ನು ಸಹ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹೌರಾ-ಹೊಸ ಜಲ್ಪೈಗುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 30 ರಂದು ವಾಸ್ತವಿಕವಾಗಿ ಉದ್ಘಾಟಿಸಿದರು ಮತ್ತು ವಾಣಿಜ್ಯ ಸೇವೆಗಳು ಜನವರಿ ಒಂದರಿಂದ ಪ್ರಾರಂಭವಾಯಿತು.