ಹಂಪಿ ಬಳಿಕ ಬೇಲೂರು ದೇಗುಲ ಯುನೆಸ್ಕೋ ಪಟ್ಟಿಗೆ ಸೇರ್ಪಡೆ : ಸಿಎಂ ಬಸವರಾಜ ಬೊಮ್ಮಾಯಿ

ಹಾಸನ : ಬೇಲೂರಿನ ದೇಗುಲ ಯುನೆಸ್ಕೋ ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲು ಬೇಕಾದ ಇತಿಹಾಸದ ದಾಖಲೆಗಳನ್ನು ನೀಡಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾನಸ ಜಿಲ್ಲೆಯ ಬೇಲೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ದೇಶ ವಿದೇಶಗಳಿಂದ ಪ್ರವಾಸಿಗರು ಬರಲು ಅನುಕೂಲವಾಗುತ್ತದೆ.
ವಿದೇಶದಿಂದ ದೊಡ್ಡ ಪ್ರಮಾಣದಲ್ಲಿ ಪ್ರವಾಸಿಗರು ಬರುತ್ತಾರೆ. ಹಂಪಿ ಬಳಿಕ ಯುನೆಸ್ಕೋ ಪಟ್ಟಿಗೆ ಬೇಲೂರಿನ ದೇಗುಲ ಸೇರ್ಪಡೆಯಾಗಲಿದೆ. ಈ ಮೂಲಕ ಬೇಲೂರು, ಹಳೇಬೀಡು ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ ಎಂದು ಹೇಳಿದ್ದಾರೆ.